LATEST NEWS
ಬೆಂದೂರ್ ವಾರ್ಡಿನಲ್ಲಿ ರಸ್ತೆ ಕಾಂಕ್ರೀಟೀಕರಣಕ್ಕೆ ಭೂಮಿ ಪೂಜೆ
ಮಂಗಳೂರು ಡಿಸೆಂಬರ್ 06: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬೆಂದೂರ್ ವಾರ್ಡಿನಲ್ಲಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಅವರು, ಬೆಂದೂರ್ ವಾರ್ಡಿನ ಬಲ್ಮಠ ಮಿಶನ್ ಸಹೋದಯ ಗೇಟಿನಿಂದ ಗುರುದೇವ ಅಪಾರ್ಟ್ಮೆಂಟ್ ಸಮೀಪದ ವರೆಗೆ ಮಳೆಯಿಂದ ಹಾನಿಗೀಡಾದ ರಸ್ತೆಯನ್ನು ಅಭಿವೃದ್ಧಿಪಡಿಸಲು 15 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು ಕಾಮಗಾರಿಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ನಗರದ ಸಮಗ್ರ ಅಭಿವೃದ್ಧಿಯ ಚಿಂತನೆಯಿಂದ ಈಗಾಗಲೇ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರವಾಸೋದ್ಯಮ, ಮೂಲಭೂತ ಸೌಕರ್ಯ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಮಂಗಳೂರು ನಗರವು ಅಭಿವೃದ್ಧಿಯಲ್ಲಿ ಮಾದರಿಯಾಗಿಸುವ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
You must be logged in to post a comment Login