Connect with us

DAKSHINA KANNADA

ಮಂಗಳೂರು – ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಜೂನ್ 20): ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಫಲಾನುಭವಿಗಳ ದಾಖಲೆ ಪರಿಶೀಲನೆ, ಸ್ಥಳ ಪರಿಶೀಲನೆ, ಮತ್ತಿತರ ಪ್ರಕ್ರಿಯೆಗಳನ್ನು ವಿಳಂಬವಾಗಿ ನಡೆಸುವುದು ಸರಿಯಲ್ಲ. ಇದರಿಂದ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯಗಳು ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಅಗತ್ಯವಿದ್ದರೆ ಮಾತ್ರ ಫಲಾನುಭವಿಗಳ ವಾಸಸ್ಥಳ ಪರಿಶೀಲನೆ ನಡೆಸಿ ತ್ವರಿತಗತಿಯಲ್ಲಿ ಸೌಲಭ್ಯಗಳನ್ನು ಮಂಜೂರು ಮಾಡಬೇಕು ಎಂದು ಅವರು ತಿಳಿಸಿದರು. ಫಲಾನುಭವಿಗಳ ಆಯ್ಕೆಯನ್ನು ಎಲ್ಲರಿಗೂ ಸಮಾನವಾಗಿ ದೊರಕಿಸಲು ತಾಲೂಕುವಾರು ಆಯ್ಕೆ ಪ್ರಕ್ರಿಯೆ ನಡೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು. ಬ್ಯಾಂಕ್ ಆಧಾರಿತ ಸಾಲ ಸೌಲಭ್ಯಗಳಲ್ಲಿ ಫಲಾನುಭವಿಗಳಿಗೆ ಸೌಲಭ್ಯ ಮಂಜೂರು ಮಾಡುವಾಗ ಬ್ಯಾಂಕುಗಳು ಸಿಬಿಲ್ ಕಡಿಮೆ ನೆಪದಲ್ಲಿ ಅರ್ಜಿಗಳನ್ನು ತಿರಸ್ಕರಿಸುವುದರ ಬಗ್ಗೆ ಬ್ಯಾಂಕರ್ಸ್‍ಗಳೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವುದೇ ಪೌರ ಕಾರ್ಮಿಕರು ಅಪಘಾತಕ್ಕೀಡಾದರೆ ಅಥವಾ ಮರಣ ಹೊಂದಿದರೆ ಆ ಬಗ್ಗೆ 24 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ವರದಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು. ನಗರ ಪೌರಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಗ್ರಾಮ ಪಂಚಾಯತ್ ಪೌರಕಾರ್ಮಿಕರಿಗೂ ದೊರಕಿಸಬೇಕು. ಪೌರ ಕಾರ್ಮಿಕರ ಪರಿಹಾರ ಮೊತ್ತವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *