Connect with us

    KARNATAKA

    ಬೆಂಗಳೂರು – ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಬರ್ಬರ ಕೊಲೆ

    ಬೆಂಗಳೂರು ನವೆಂಬರ್ 05: ಬೆಂಗಳೂರನ ಗಣಿ ಮತ್ತು ಭೂ ವಿಜ್ಞಾನ ಇಲಾಾಖೆಯ ಮಹಿಳಾ ಅಧಿಕಾರಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


    ಕೊಲೆಯಾದ ಮಹಿಳೆಯನ್ನು ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (37) ಎಂದು ಗುರುತಿಸಲಾಗಿದೆ. ಪ್ರತಿಮಾ ಅವರು ಪತಿಯಿಂದ ವಿಚ್ಛೇದನ ಪಡೆದು ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ.


    ಪ್ರತಿಮಾ ಶನಿವಾರ ರಾತ್ರಿ 8 ಗಂಟೆಗೆ ಇಲಾಖೆಯ ವಾಹನದಲ್ಲಿ ಕಚೇರಿಯಿಂದ ಮನೆಗೆ ಬಂದಿದ್ದರು. ರಾತ್ರಿ ಅಣ್ಣ ​ಕರೆ ಮಾಡಿದಾಗ ಸ್ವೀಕರಿಸಿ ಮಾತನಾಡಿದ್ದರು. ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರತಿಮಾ ನೆಲೆಸಿದ್ದ ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply