KARNATAKA
ಬೆಂಗಳೂರು: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ಯುವತಿ ಬಲಿ
ಬೆಂಗಳೂರು, ಮಾರ್ಚ್ 01: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್ ಎಂಬಾತ ಕೊಲೆ ಮಾಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮುರುಗೇಶ್ಪಾಳ್ಯದಲ್ಲಿ ಈ ಪ್ರಕರಣ ನಡೆದಿದೆ. ಲೀಲಾ ಪವಿತ್ರ (26) ಕೊಲೆಯಾದ ಯುವತಿ. ಆಂಧ್ರಪ್ರದೇಶ ಮೂಲದ ಈಕೆ ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇಂದು ಕೆಲಸ ಮುಗಿಸಿ ಹೊರಗಡೆ ಬಂದಾಗ ಆರೋಪಿ ಈಕೆಯ ಕೊಲೆ ಮಾಡಿದ್ದಾನೆ.
ಮುರಗೇಶ್ ಪಾಳ್ಯದ ಎನ್ಎಎಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಎದೆ, ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಒಟ್ಟು ಸುಮಾರು 16 ಸಲ ಇರಿದು ಕೊಲೆ ಮಾಡಿರುವ ಆರೋಪಿ ಈಗ ಪೊಲೀಸರ ವಶದಲ್ಲಿದ್ದಾನೆ. ಜೀವನ್ಬಿಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಇಬ್ಬರೂ ಐದು ವರ್ಷಗಳಿಂದ ಪ್ರೀತಿಸುತ್ತಿದ್ದು, ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧವಿತ್ತು. ಅದೇ ಕಾರಣಕ್ಕೆ ಯುವತಿ ಯುವಕನಿಂದ ಅಂತರ ಕಾಯ್ದುಕೊಂಡಿದ್ದಳು. ಇದರಿಂದ ಬೇಸತ್ತ ಯುವಕ ಈ ಕೃತ್ಯ ಎಸಗಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
You must be logged in to post a comment Login