Connect with us

    KARNATAKA

    ಬೆಂಗಳೂರು ಬಂದ್: ಮಾಜಿ ಕ್ರಿಕೆಟಿಗ ಕುಂಬ್ಳೆಗೆ ತಟ್ಟಿದ ಬಂದ್ ಬಿಸಿ- ಬಿಎಂಟಿಸಿಯಲ್ಲಿ ಪ್ರಯಾಣ

    ಬೆಂಗಳೂರು, ಸೆಪ್ಟೆಂಬರ್ 11: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಗೂ ಬೆಂಗಳೂರು ಖಾಸಗಿ ಸಾರಿಗೆ ಚಾಲಕರ ಒಕ್ಕೂಟದ ಬಂದ್ ಬಿಸಿ ತಟ್ಟಿದೆ.

    ಬೆಂಗಳೂರು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರಿಗೆ ವಿಮಾನ ನಿಲ್ದಾಣದ ಸಿಬ್ಬಂದಿ ಬೆಂಗಳೂರು ಬಂದ್ ಹಿನ್ನೆಲೆ ಕ್ಯಾಬ್ ಇಲ್ಲದಿರುವ ಮಾಹಿತಿ ನೀಡಿದ್ದಾರೆ. ಇದರಿಂದ ಬಿಎಂಟಿಸಿ ವಾಯುವಜ್ರ ಬಸ್ ಏರಿ ಅವರು ಮನೆ ಕಡೆ ತೆರಳಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಸೆಲ್ಫಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬಿಎಂಟಿಸಿಯಲ್ಲಿ ಪ್ರಯಾಣ ಮಾಡುತ್ತಿರುವುದಾಗಿ ಅದರಲ್ಲಿ ಬರೆದುಕೊಂಡಿದ್ದಾರೆ. ಫೋಟೋದಲ್ಲಿ ದೊಡ್ಡ ಬ್ಯಾಗ್‌ಗಳೊಂದಿಗೆ ಅವರು ಇರುವುದನ್ನು ನೋಡಬಹುದಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply