Connect with us

    KARNATAKA

    ಬೆಂಗಳೂರು: ರೌಡಿಶೀಟರ್‌ ಸಹದೇವ್‌ ಬರ್ಬರ ಹತ್ಯೆ

    ಬೆಂಗಳೂರು, ನವೆಂಬರ್ 09 : ಟೀ ಕುಡಿಯಲು ಬೇಕರಿ ಬಳಿ ಬಂದ ರೌಡಿಶೀಟರ್‌ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.

    ಸಹದೇವ್ ಕೊಲೆಯಾದ ರೌಡಿಶೀಟರ್. ರಾತ್ರಿ 9:30 ರ ಸುಮಾರಿಗೆ ಸಹದೇವ್‌ ಹತ್ಯೆಯಾಗಿದೆ. ಈತ ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್‌ ಆಗಿದ್ದ. ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಉಡುಪಿ : ಆಟೋ ಚಾಲಕನ ಮೇಲೆ ದೌರ್ಜನ್ಯದ ಆರೋಪ, ಜಯಲಕ್ಷ್ಮಿ ಸಿಲ್ಕ್ಸ್ಎದುರು ಆಟೋಚಾಲಕರ ಪ್ರತಿಭಟನೆ..!

    ಟೀ ಕುಡಿಯಲು ಬೇಕರಿ ಬಳಿ ರೌಡಿಶೀಟರ್‌ ಸಹದೇವ್‌ ಬಂದಿದ್ದ. ಈ ವೇಳೆ ಮೂರು ಬೈಕ್‌ನಲ್ಲಿ ಬಂದಿದ್ದ ಆರು ಮಂದಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply