Connect with us

    KARNATAKA

    ಅಂಗವಿಕಲೆ ಮಹಿಳೆಗೆ ಬೂಟುಗಾಲಿನಲ್ಲಿ ಒದ್ದ ಎಎಸ್ಐ ನಾರಾಯಣ ಸಸ್ಪೆಂಡ್

    ಬೆಂಗಳೂರು: ಅಂಗವಿಕಲೆ ಮಹಿಳೆ ಎಂದು ನೋಡದೆ ಬೂಟುಗಾಲಿನಲ್ಲಿ ನಡು ರಸ್ತೆಯಲ್ಲಿ ಮನಬಂದಂತೆ ಥಳಿಸಿದ ಎಎಸ್ಐ ನಾರಾಯಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.


    ವಾಹನಗಳ ಟೋಯಿಂಗ್ ಮಾಡುತ್ತಿದ್ದ ಪೊಲೀಸ್‌ಗೆ ಕಲ್ಲಿನಿಂದ ಹೊಡೆದರೆಂಬ ಕಾರಣಕ್ಕೆ, ಅಂಗವಿಕಲ‌ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಆಧರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತನಿಖೆಗೆ ಸೂಚನೆ ನೀಡಿದ್ದರು.

    ಪ್ರಾಥಮಿಕ ತನಿಖೆ ‌ನಡೆಸಿದ‌ ಸಂಚಾರ ವಿಭಾಗದ ಜಂಟಿ‌ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರು, ಹಲಸೂರು ಗೇಟ್ ಸಂಚಾರ ಠಾಣೆ ಎಎಸ್ಐ ನಾರಾಯಣ ಅವರನ್ನು ‌ಅಮಾನತು ಮಾಡಿದ್ದಾರೆ. ‘ಎಎಸ್ಐ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು‌ ಮಾಡಲಾಗಿದೆ. ಅವರ ಮೇಲಿನ ಆರೋಪದ ಬಗ್ಗೆ ಇಲಾಖಾ ವಿಚಾರಣೆ ನಡೆಯಲಿದೆ’ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply