Connect with us

LATEST NEWS

ಉಳ್ಳಾಲದಲ್ಲಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಮಹಿಳೆಯರ ರಕ್ಷಣೆ

ಉಳ್ಳಾಲ ಎಪ್ರಿಲ್ 13: ಉಳ್ಳಾಲ ಸಮುದ್ರ ತೀರದಲ್ಲಿ ನೀರಿಗಿಳಿದು ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರನ್ನು ಸ್ಥಳೀಯ ಈಜುಗಾರರು ರಕ್ಷಣೆ ಮಾಡಿದ್ದಾರೆ. ನಾಲ್ವರಲ್ಲಿ ಓರ್ವ ಮಹಿಳೆಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.


ಬೆಂಗಳೂರು ನಾಯಂಡನ ಹಳ್ಳಿಯ ಸವಿತಾ (38), ಸೌಮ್ಯಾ (39), ಬಿಂದು(20), ಪದ್ಮಿನಿ(38) ಮತ್ತು ಮಂಜುಳ(35) ಎಂಬ ಐವರು ಮಹಿಳೆಯರು ರವಿವಾರ ಬೆಳಿಗ್ಗೆ ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ವೇಳೆ ಉಳ್ಳಾಲ ಸಮುದ್ರ ತೀರಕ್ಕೆ ತೆರಳಿದ್ದರು. ಐವರು ಯುವತಿಯರು ಸಮುದ್ರ ತೀರದಲ್ಲಿ ಕುಳಿತ್ತಿದ್ದ ವೇಳೆ ಬೃಹತ್ ಗಾತ್ರದ ಅಲೆಯೊಂದು ತೀರಕ್ಕೆ ಅಪ್ಪಳಿಸಿದ್ದು ಸವಿತಾ, ಸೌಮ್ಯ, ಬಿಂದು, ಪದ್ಮಿನಿ ನೀರು ಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಈಜುಗಾರರು ನಾಲ್ವರು ಯುವತಿಯರನ್ನ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪದ್ಮಿನಿ ಸ್ಥಿತಿ ಸ್ವಲ್ಪ ಗಂಭೀರಗೊಂಡಿದ್ದು ಉಳಿದವರು ಚೇತರಿಸಿದ್ದಾರೆ ಎಂದು ತಿಳಿದುಬಂದಿದೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *