Connect with us

    KARNATAKA

    ಎಚ್ಚರ, ಮಂಗಳೂರಿನಲ್ಲಿ ಸಕ್ರೀಯವಾಗಿದೆ ಖೋಟಾ ನೋಟು ಜಾಲ, ಓರ್ವನ ಬಂಧನ..!

    ಮಂಗಳೂರು :   ಮಂಗಳೂರು ನಗರದಲ್ಲಿ ಖೋಟಾ ನೋಟು ಜಾಲ ಸಕ್ರೀಯವಾಗಿದ್ದು ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ತನಿಖೆ ತೀವ್ರಗೊಂಡಿದೆ.

    ವಶಪಡಿಸಿಕೊಂಡ ಖೋಟಾ ನೋಟುಗಳು

    ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮಂಜೇಶ್ವರ ಮೂಲದ ಪ್ರಶ್ವಿತ್(25) ಬಂಧಿತ ಆರೋಪಿಯಾಗಿದ್ದಾನೆ. ಭಾನುವಾರ ನಗರದ ಕಂಕನಾಡಿ ಬಳಿಯಲ್ಲಿ ಒಬ್ಬನು ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಆರೋಪಿ ಪ್ರಶ್ವಿತ್ ನನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿ 500 ರೂಪಾಯಿ ಮುಖಬೆಲೆಯ, 200 ರೂಪಾಯಿ ಮುಖಬೆಲೆಯ ಮತ್ತು 100 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು 500 ರೂ ಮುಖಬೆಲೆಯ 3 ನೋಟುಗಳು, 200 ರೂ ಮುಖಬೆಲೆಯ 2 ನೋಟುಗಳು ಹಾಗೂ 100 ರೂ ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿರುತ್ತಾರೆ. , ಈವರೆಗೆ ಸುಮಾರು 8 ರಿಂದ 9 ಸಾವಿರ ರೂಗಳ ಖೋಟಾ ನೋಟುಗಳನ್ನು ಆರೋಪಿ ಚಲಾವಣೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply