Connect with us

LATEST NEWS

ಬಿಗು ಭದ್ರತೆಯಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರ್

ಬಿಗು ಭದ್ರತೆಯಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರ್

ಉಡುಪಿ ಜುಲೈ 16: ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಬಹುಕೋಟಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ಪ್ರಮುಖ ಆರೋಪಿಗಳು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಮೂರು ದಿನಗಳ ಕಾಲ ನ್ಯಾಯಾಲಯದಲ್ಲಿ ವಾದ ವಿವಾದ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದು ಪೊಲೀಸರು ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ, ನಂದಳಿಕೆ ನಿರಂಜನ್ ಭಟ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಇಂದು ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಹಿನ್ನಲೆಯಲ್ಲಿ ಉಡುಪಿ ನ್ಯಾಯಾಲಯದಲ್ಲಿ ಪೊಲೀಸ್ ಬಿಗುಬಂದೋಬಸ್ತ್‌ ಕಲ್ಲಿಸಲಾಗಿದೆ. ಕೋರ್ಟ್ ಆವರಣದ ಮುಂಭಾಗ ಸಶಸ್ತ್ರ ಹೊಂದಿರುವ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ನ್ಯಾಯಾಲಯ ಒಳಗಡೆ ಲೋಹ ಶೋಧಕವನ್ನು ಅಳವಡಿಸಲಾಗಿದೆ. ಬಿಗು ಭದ್ರತೆ ಹಿನ್ನಲೆ ಪತ್ರಕರ್ತರಿಗೂ ನಿರ್ಬಂಧ ಹೇರಲಾಗಿದೆ.

ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಭಾಸ್ಕರ ಶೆಟ್ಟಿ ಅವರ ತಾಯಿ ಗುಲಾಬಿ ಶೆಡ್ತಿ ಅವರು ಆಗಮಿಸಿದ್ದಾರೆ. ಇನ್ನು ಮೂರು ದಿನಗಳ‌ ಕಾಲ‌ ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆಯಲಿದೆ. ಆರೋಪಿಗಳ ಪರ ನಾರಾಯಣ ಪೂಜಾರಿ ಹಾಗೂ ವಿಕ್ರಂ ಹೆಗ್ಡೆ ವಕಾಲತ್ತು ವಹಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *