Connect with us

    LATEST NEWS

    ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ – ಶಿಕ್ಷೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಮೊರೆ ಹೋದ ಆರೋಪಿಗಳು

    ಉಡುಪಿ, ಜುಲೈ 13: ಉದ್ಯಮಿ ಭಾಸ್ಕರ ಶೆಟ್ಟಿಯವರನ್ನು ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ನವನೀತ ಶೆಟ್ಟಿ ಉಡುಪಿ ಜಿಲ್ಲಾ ನ್ಯಾಯಾಲಯದ ಶಿಕ್ಷೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


    2016ರಲ್ಲಿ ನಡೆದ ಈ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ.8ರಂದು ಮಹತ್ವದ ತೀರ್ಪು ನೀಡಿ, ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ಜೋತಿಷ್ಯ ನಿರಂಜನ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಂತೆ ಈ ಮೂವರು ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.


    ಈ ತೀರ್ಪಿನ ವಿರುದ್ಧ ಜು.5ರಂದು ರಾಜೇಶ್ವರಿ ಶೆಟ್ಟಿ ಹಾಗೂ ಜು.7ರಂದು ನವನೀತ್ ಶೆಟ್ಟಿ ಮೇಲ್ಮನವಿ ಹಾಗೂ ತಡೆಯಾಜ್ಞೆ ನೀಡಬೇಕು ಮತ್ತು ತಮಗೆ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆಯು ಮೂರು ವಾರದ ಬಳಿಕ ನಡೆಯುವ ಸಾಧ್ಯತೆಗಳಿವೆ.

    Share Information
    Advertisement
    Click to comment

    You must be logged in to post a comment Login

    Leave a Reply