Connect with us

    FILM

    ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ ಕುಮಾರ್

    ಬೆಂಗಳೂರು ಅಕ್ಟೋಬರ್ 19: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕರಾವಳಿಯ ಭೂತಕೋಲದ ಆರಾಧನೆಯನ್ನು ಜನ ಕಣ್ತುಂಬಿಸಿಕೊಳ್ಳುತ್ತಿದ್ದಾರೆ. . ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಕುಮಾರ್ ಅಲ್ಲಗಳೆದಿದ್ದಾರೆ.


    ಕಾಂತಾರ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ.. ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.

    ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply