Connect with us

    FILM

    ಬಿಗ್ ಬಾಸ್ ನಲ್ಲೂ ಜೈಲು ಸೇರಿದ ಚೈತ್ರಾ ಕುಂದಾಪುರ

    ಬೆಂಗಳೂರು ಅಕ್ಟೋಬರ್ 19: ಬಿಗ್ ಬಾಸ್ ಕನ್ನಡ ಸೀಸನ್ ಈಗಾಗಲೇ ಭಾರಿ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಹೊಡೆದಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಹೋಗಿದ್ದಾರೆ. ಈ ನಡುವೆ ಇದೀಗ ಸ್ಪರ್ಧಿಗಳ ನಡುವೆ ನಡೆದ ಟಾಸ್ಕ್ ಒಂದರಲ್ಲಿ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆ ಜೈಲು ಸೇರಿದ್ದಾರೆ.


    ಚೈತ್ರಾ ಕುಂದಾಪುರ ಚುನಾವಣೆ ಟಿಕೆಟ್ ವಿಚಾರದಲ್ಲಿ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದರು, ಇದೀಗ ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಇದೀಗ ಬಿಗ್ ಬಾಸ್ ನಲ್ಲೂ ಜೈಲು ಸೇರಿದ್ದಾರೆ. ಆದರೆ ಅದು ಮಾತ್ರ ಬೇರೆ ಕಾರಣಕ್ಕೆ ಪ್ರತಿ ಬಿಗ್ ಬಾಸ್​ ಸೀಸನ್​ನಲ್ಲೂ ಜೈಲು ಇಡಲಾಗುತ್ತದೆ. ಕಳಪೆ ಕಾರಣ ನೀಡಿ ಪ್ರತಿ ವಾರ ಒಬ್ಬರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಈ ಬಾರಿ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಅಪ್ರಾಮಣಿಕ ಹಾಗೂ ಕುತಂತ್ರಿ ಯಾರು ಎಂದು ಸೂಚಿಸಬೇಕು ಮತ್ತು ಅದಕ್ಕೆ ಸೂಕ್ತ ಕಾರಣ ನೀಡಬೇಕು. ಅಂತಿಮವಾಗಿ ಯಾರ ಬಳಿ ಹೆಚ್ಚು ಹಣೆಪಟ್ಟಿ ಇರುತ್ತದೆಯೋ ಅವರು ಜೈಲು ಸೇರಬೇಕು.

    ಇದರ ಅನುಸಾರ ಚೈತ್ರಾ ಕುಂದಾಪುರ ಅವರು ಅತಿ ಹೆಚ್ಚು ಹಣೆಪಟ್ಟಿ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಜೈಲು ಸೇರಿದ್ದಾರೆ. ಅವರು ಜೈಲಿಗೆ ಕಾಲಿಡುವಾಗ ಖುಷಿಯಿಂದಲೇ ತೆರಳಿದ್ದಾರೆ. ‘ನನಗೆ ಖಾಸಗಿತನ ಸಿಗುತ್ತದೆ. ಇಲ್ಲೆಲ್ಲ ನಿಮ್ಮ ಮುಖ ನೋಡಿ ಸಾಕಾಗಿದೆ’ ಎಂದರು ಅವರು. ಅವರಿಗೆ ಜೈಲಿಗೆ ಹೋಗುತ್ತಿರುವುದಕ್ಕೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply