Connect with us

BELTHANGADI

ಸ್ಕಾರ್ಪಿಯೋ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು

ಬೆಳ್ತಂಗಡಿ ಮಾರ್ಚ್ 07: ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕಲ್ಮಂಜ ಗ್ರಾಮದ ಎಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(55) ಎಂದು ಗುರುತಿಸಲಾಗಿದೆ.


ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮುಂಡಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಅಶೋಕ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಹಾಲು ಉತ್ಪಾದಕ ಸಂಘಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Click to comment

You must be logged in to post a comment Login

Leave a Reply