DAKSHINA KANNADA
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಯುವಕ ಸಾವು
ಉಪ್ಪಿನಂಗಡಿ ಮಾರ್ಚ್ 28: ಬೈಕ್ಗಳೆರಡರ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಮಾರ್ಚ್ 27ರ ಸೋಮವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ. ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
You must be logged in to post a comment Login