Connect with us

    BANTWAL

    ಬಂಟ್ವಾಳ – ಬೈಕ್ ಗೆ ಖಾಸಗಿ ಬಸ್ ಡಿಕ್ಕಿ – ಬೈಕ್ ಸವಾರ ಸಾವು….!!

    ಬಂಟ್ವಾಳ ಜುಲೈ 30 : ಬೈಕ್ ಒಂದಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ( 28) ಎಂದು ಗುರುತಿಸಲಾಗಿದೆ.


    ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಲತೀಶ್ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ . ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿ ಯಾಗಿದೆ. ಡಿಕ್ಕಿಯ ರಭಸಕ್ಕೆ ಲತೀಶ್ ಗೆ ಗಂಭೀರವಾಗಿ ಗಾಯವಾಗಿತ್ತು.ಈತನನ್ನು ಕೂಡಲೇ ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಈತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಲತೀಶ್ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply