LATEST NEWS
ತೊಕ್ಕೊಟ್ಟು – ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರರಿಗೆ ಗಾಯ
ಮಂಗಳೂರು ಮೇ 27: ಕಾರು ಎಡಬದಿಗೆ ತಿರುಗಿಸುವ ವೇಳೆ ವೇಗದಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ.
ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಮನದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಲ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲಾಗಿದೆ. ಘಟನೆ ಕುರಿತ ಸಿಸಿಟಿವಿ ದೃಶ್ಯ ಸೆರೆಯಾಗಿದೆ.
You must be logged in to post a comment Login