LATEST NEWS
ಬೈಕ್ ಗೆ ಕಾರು ಡಿಕ್ಕಿ – ಬೈಕ್ ಸವಾರರಿಗೆ ಗಂಭೀರ ಗಾಯ
ಮಂಗಳೂರು, ಅಕ್ಟೋಬರ್ 8: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ಶನಿವಾರ ರಾತ್ರಿ ನಡೆದಿದೆ.
ಗಾಯಗೊಂಡ ಯುವಕರನ್ನು ಬೆಂಗರೆ ನಿವಾಸಿ ಮೊಯ್ದಿನ್ ನಾಝಿಮ್ ಮತ್ತು ಅವರ ಸ್ನೇಹಿತ ಸಾಲೆತ್ತೂರು ನಿವಾಸಿ ಅನಸ್ ಎಂದು ತಿಳಿದು ಬಂದಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ 7:30 ಸುಮಾರಿಗೆ ನಾಝಿಮ್ ಸಾಲೆತ್ತೂರಿಗೆ ತೆರಳುವ ಸ್ನೇಹಿತ ಅನಸ್ ರನ್ನು ತನ್ನ ಬೈಕ್ನಲ್ಲಿ ಕುಳ್ಳಿರಿಸಿಕೊಂಡು ಕೂಳೂರು ಬಸ್ ನಿಲ್ದಾಣಕ್ಕೆ ಬರುತ್ತಿದ್ದರು. ಈ ವೇಳೆ ಬೈಕ್ ತಣ್ಣೀರುಬಾವಿ ಬೀಚ್ ಸಮೀಪಿಸುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತ ನಡೆಸಿ ಪರಾರಿಯಾಗಿರುವ ವಾಹನದ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
You must be logged in to post a comment Login