Connect with us

    DAKSHINA KANNADA

    ಬೈಕ್ ಮತ್ತು ಜೀಪ್ ನಡುವೆ ಭೀಕರ ರಸ್ತೆ ಅಪಘಾತ – ವಿಧ್ಯಾರ್ಥಿ ಸಾವು

    ಪುತ್ತೂರು ಮಾರ್ಚ್ 23: ಬೈಕ್ ಹಾಗೂ ಜೀಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಕುಂಬಳಚೇರಿ ಎಂಬಲ್ಲಿ ನಡೆದಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.


    ಮೃತ ಬಾಲಕನನ್ನು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂದು ಗುರುತಿಸಲಾಗಿದ್ದು, ಮತ್ತೋರ್ವ ವಿಧ್ಯಾರ್ಥಿ ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
    ಇಬ್ಬರು ಬಾಲಕರು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದರು. ಕುಂಬಳಚೇರಿ ಬಳಿಯ ಗಡಿ ಗುಡ್ಡೆ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಜೀಪ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಜೀಪಿಗೆ ಗುದ್ದಿತೆನ್ನಲಾಗಿದೆ.

    ತಲೆ ಒಡೆಯಲ್ಪಟ್ಟು ವಿಶ್ವದೀಪ್ ಸ್ಥಳದಲ್ಲೇ ಮೃತಪಟ್ಟರೆ ದರ್ಶನ್ ಗೆ ತೀವ್ರ ಗಾಯಗಳಾಗಿದೆ. ಅವರಿಬ್ಬರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ದರ್ಶನ್ ನನ್ನು ಮಂಗಳೂರಿಗೆ ಕಳಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply