DAKSHINA KANNADA
ಉಪ್ಪಿನಂಗಡಿ – ಬೈಕ್ ಮತ್ತು ಲಾರಿ ನಡುವೆ ಅಪಘಾತ ಬೈಕ್ ಸವಾರ ಸಾವು
ಉಪ್ಪಿನಂಗಡಿ ನವೆಂಬರ್ 2: ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನವೆಂಬರ್ 1 ರಂದು ರಾತ್ರಿ ರಾ.ಹೆ. 75ರ ನೆಲ್ಯಾಡಿ ಸಮೀಪ ವರದಿಯಾಗಿದೆ.
ಮೃತ ಬೈಕ್ ಸವಾರನನ್ನು ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಸಮೀಪದ ನಿವಾಸಿ ಸುರೇಂದ್ರ ಮಹತೋ (35) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಂದ್ರ ಮಹತೋ ಬುಧವಾರ ರಂದು ರಾತ್ರಿ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ಲಾರಿ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಸುರೇಂದ್ರ ಮೆಹತೋ ಅವರನ್ನು ತಕ್ಷಣ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟರು ಎಂದು ವರದಿಯಾಗಿದೆ.
You must be logged in to post a comment Login