Connect with us

DAKSHINA KANNADA

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಸಾವು.. ಮತ್ತಿಬ್ಬರು ಗಂಭೀರ

ಉಪ್ಪಿನಂಗಡಿ ಎಪ್ರಿಲ್ 20: ಬೈಕ್ ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.


ಬೈಕ್ ಗಳ ಅಪಘಾತದಲ್ಲಿ ರಾಜೇಶ್ (30) ಎಂಬವರು ಮೃತಪಟ್ಟವರಾಗಿದ್ದು, ಅವರ ಸಹ ಸವಾರ ಪುರಂದರ ಹಾಗೂ ಇನ್ನೊಂದು ಬೈಕ್ ಚಲಾಯಿಸುತ್ತಿದ್ದ ಶಾಫಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಕುಪ್ಪೆಟ್ಟಿ ಕಡೆಯಿಂದ ಬಂದಾರು ಕಡೆ ರಾಜೇಶ್ ಅವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಶಾಫಿ ಅವರು ಚಲಾಯಿಸಿಕೊಂಡು ಬರುತ್ತಿದ್ದ ಶಾಫಿ ಎಂಬವರ ಬೈಕ್ ಉರುವಾಲು ಮಸೀದಿ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ರಾಜೇಶ್ ಚಲಾಯಿಸುತ್ತಿದ್ದ ಬೈಕ್ ನಲ್ಲಿ ಪುರಂದರ ಸಹಸವಾರನಾಗಿದ್ದರು. ಅಪಘಾತದ ರಭಸಕ್ಕೆ ಮೂವರೂ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಆಸ್ಪತ್ರೆ ತಲುಪುವಷ್ಟರಲ್ಲಿ ರಾಜೇಶ್ ಮೃತಪಟ್ಟಿದ್ದರು. ಪುರಂದರ ಅವರ ತಲೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಯಲ್ಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *