Connect with us

DAKSHINA KANNADA

ರಸ್ತೆಯಲ್ಲಿ ನೇತಾಡುತ್ತಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ದ್ವಿಚಕ್ರವಾಹನ ಸವಾರ ಸಾವು….!!

ಪುತ್ತೂರು ಜನವರಿ 07: ಅಪಘಾತದಿಂದಾಗಿ ತುಂಡಾಗಿ ರಸ್ತೆಯಲ್ಲಿ ಬಿದಿದ್ದ ವಿದ್ಯುತ್ ತಂತಿ ಬೈಕ್ ಸವಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಧಾರುಣವಾಗಿ ಸಾವನಪ್ಪಿರುವ ಘಟನೆ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ಗುರುವಾರ ತಡರಾತ್ರಿ ನಡೆದಿದೆ.


ಮೃತರನ್ನು ಕೊಯ್ಯುರು ನಿವಾಸಿ ರಘು ಎಂದು ಗುರುತಿಸಲಾಗಿದೆ. ಹೇಡ್ಯ ಸೊಸೈಟಿ ಬಳಿ ರಾತ್ರಿ ಸಂದರ್ಭ ಹುಲ್ಲು ಸಾಗಾಟದ ಪಿಕಪ್ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿತ್ತು, ಇದರಿಂದಾಗಿ ನಾಲ್ಕೈದು ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದಿದ್ದು, ಅದರ ತಂತಿಗಳು ರಸ್ತೆಯಲ್ಲಿ ನೇತಾಡುತ್ತಿದ್ದವು, ಮೃತ ರಘು ಅವರು ರಾತ್ರಿ 11 ಗಂಟೆ ವೇಳೆಗೆ ಬೈಕ್ ನಲ್ಲಿ ಹೇಡ್ಯ ಸೊಸೈಟಿ ಬಳಿ ಸಂಚರಿಸುತ್ತಿದ್ದ ಸಂದರ್ಭ ಅವರ ಕುತ್ತಿಗೆಗೆ ತಂತಿಗಳು ಸಿಕ್ಕಿಕೊಂಡು ರಸ್ತೆಗೆಸೆಯಲ್ಪಟ್ಟಿದ್ದಾರೆ.

ತಲೆಗೆ ಗಂಭೀರ ಗಾಯಗೊಂಡ ರಘು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *