Connect with us

    KARNATAKA

     ಬೈಕ್​ನಲ್ಲಿ ಹೋಗುವಾಗ ಮಳೆಯಿಂದ ಜೋತು ಬಿದ್ದ ವಿದ್ಯುತ್ ತಂತಿ ಕರೆಂಟ್ ಹೊಡೆದು ಇಬ್ಬರು ಮೃತ್ಯು..!

    ಚಾಮರಾಜನಗರ :  ಬೈಕ್​ನಲ್ಲಿ ಹೋಗುವಾಗ ಮಳೆಯಿಂದ ಜೋತು ಬಿದ್ದ ವಿದ್ಯುತ್ ತಂತಿ ಕರೆಂಟ್ ಹೊಡೆದು ಇಬ್ಬರು  ಸವಾರರು ದಾರಣ ಅಂತ್ಯ ಕಂಡ ಘಟನೆ ಚಾಮರಾಜನಗರ ದಲ್ಲಿ ನಡೆದಿದೆ.

    ಚಾಮರಾಜನಗರದ  ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48) ಮತ್ತು ಮಲ್ಲೇಶ್ (40) ಮೃತ ದುರ್ದೈವಿಗಳು.  ಬುಧವಾರ ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ಭಾರಿ ಮಳೆಯ ಕಾರಣ ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿರುತ್ತಾರೆ. ಸ್ಥಳಕ್ಕೆ ಪೂರ್ವ ಪೊಲೀಸ್‌ ಠಾಣೆ ಪೊಲೀಸರು ಭೇಟಿ ನೀಡಿದ್ದು , ಪ್ರಕರಣ  ದಾಖಲು ಮಾಡಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ಚೆಸ್ಕಾಂ ನ್ನು  ಮೃತರ ಸಂಬಂಧಿಕರು ಆಗ್ರಹಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply