Connect with us

LATEST NEWS

ನೇತ್ರಾವತಿ ಸೇತುವೆ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

ಮಂಗಳೂರು ಜನವರಿ 20: ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.


ಮೃತನನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲೆಟ್ಸ್ ಪಾರ್ಟಿ ಎಂಬ ಹೆಸರಿನಲ್ಲಿ ಅಂಗಡಿಯೊಂದನ್ನು ಹೊಂದಿದ್ದ ಇವರು ಚಿಲಿಂಬಿ ನಿವಾಸಿಯಾಗಿದ್ದಾರೆ. ನಿನ್ನೆ ಸಮಾರಂಭವೊಂದನ್ನು ಮುಗಿಸಿ ಬರುತ್ತಿದ್ದ ಸಂದರ್ಭ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಬೈಕ್ ಸ್ಕಿಡ್ ಆಗಿ ರಸ್ತೆಯ ಬದಿಗೆ ಬಿದ್ದು, ತಲೆಗೆ ಗಂಭೀರ ಗಾಯಗಳಾಗಿತ್ತು. ನಂತರ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Advertisement
Click to comment

You must be logged in to post a comment Login

Leave a Reply