Connect with us

LATEST NEWS

ಮಂಗಳೂರು – ಜನವರಿ 29 ರಂದು ಬಿಲ್ಲವರ ಬೃಹತ್ ಸಮಾವೇಶ….!!

ಮಂಗಳೂರು ನವೆಂಬರ್ 02: ಬಿಲ್ಲವ ಸಮುದಾಯದ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜನವರಿ 29 ರಂದು ಮಂಗಳೂರಿನಲ್ಲಿ ಬಿಲ್ಲವರ ಬೃಹತ್ ಸಮಾವೇಶ ನಡೆಸಲು ಬಿಲ್ಲವ ಸಂಘಟನೆಗಳು ನಿರ್ಧರಿಸಿವೆ.


ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಿಲ್ಲವರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂಬ ಬೇಡಿಕೆ ಈಡೇರಿಕೆಗೆ ಸರ್ಕಾರ ಮೀನಮೇಷ ಎಣಿಸುತ್ತಿರುವುದು ಬಿಲ್ಲವ ಸಮಾಜದ ಆಕ್ರೋಶಕ್ಕೆ ಕಾರಣವಾಗಿದೆ. 2019ರಲ್ಲಿ ಬ್ರಹ್ಮಾವರದಲ್ಲಿ ನಡೆದಿದ್ದ ಬಿಲ್ಲವರ ಭಾರಿ ಸಮಾವೇಶದ ಪ್ರಮುಖ ಬೇಡಿಕೆ ಇನ್ನೂ ಈಡೇರಿಲ್ಲ. ಹಾಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಮಂಗಳೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಭಾರಿ ಸಮಾವೇಶವನ್ನು ನಡೆಸಲು ಬಿಲ್ಲವ ಸಮಾಜದ ಪ್ರಮುಖರು ಸಿದ್ಧತೆ ನಡೆಸಿದ್ದಾರೆ.

ಸಮಾಜದ ಮುಖಂಡ ಬಿ.ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಮಂಗಳೂರಿನಲ್ಲಿ 2023ರ ಜ.29ರಂದು ಸಮಾವೇಶ ನಡೆಯಲಿದೆ. ಸ್ಥಳ ಇನ್ನಷ್ಟೇ ನಿಗದಿಯಾಗಬೇಕಿದೆ’ ಎಂದು ತಿಳಿಸಿದರು. ‘ಅಂದು ಸಂಜೆ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದ್ದು, 4 ಗಂಟೆಗೆ ಸಮಾವೇಶ ನಡೆಯಲಿದೆ. ಕುದ್ರೋಳಿ, ಕಟಪಾಡಿ ವಿಶ್ವನಾಥ ಕ್ಷೇತ್ರ, ಗೆಜ್ಜೆಗಿರಿ ಕ್ಷೇತ್ರ, ಕಂಕನಾಡಿ ಗರೋಡಿಯ ಪ್ರಮುಖರು ಸಹಮತ ವ್ಯಕ್ತಪಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *