ಬೀದರ್: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ತುರಿ ಬೆಳೆ  ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ (Bidar) ಪೊಲೀಸರು (Police) ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ಬೀದರ್  ಎಸ್ಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. ಜಮೀನಿನಲ್ಲಿ 6 ಅಡಿಯ 700ಕ್ಕೂ ಅಧಿಕ ಗಿಡಗಳನ್ನು ಬೆಳೆದಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ಬಸಂತ್ ಎಂಬಾತ ಗಾಂಜಾ ಬೆಳೆದಿದ್ದ ಎಂದು ತಿಳಿದು ಬಂದಿದೆ. ಆತ ಪರಾರಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
  ಈ ಕುರಿತು ಮಂಠಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಪ್ರಕರಣ ಭೇದಿಸಿದ ಮಂಠಾಳ ಪಿಎಸ್​ಐ ಅವರಿಗೆ 10 ಸಾವಿರ ರೂ ಬಹುಮಾನ ನೀಡಲಾಯಿತು.