Connect with us

DAKSHINA KANNADA

ಬಿರುಮಲೆ ಬೆಟ್ಟದಲ್ಲಿ ಅನೈತಿಕ ಚಟುವಟಿಕೆ ಯುವತಿ ಸೇರಿದಂತೆ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ ..!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಓರ್ವ ಯುವತಿ ಹಾಗೂ ನಾಲ್ವರು ಯುವಕರನ್ನು ಭಜರಂಗದಳದ ಸಂಘಟನೆಯ ಕಾರ್ಯಕರ್ತರು ರೆಡ್‌ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಕೇರಳ ರಾಜ್ಯ ನೋಂದಾವಣೆಯಾಗಿರುವ ಕಾರಿನಲ್ಲಿ ಇಲ್ಲಿಗೆ ಬಂದಿದ್ದು ತಂಡದಲ್ಲಿ ಓರ್ವ ಯುವತಿ ಮತ್ತು ನಾಲ್ವರು ಯುವಕರು ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಅಕ್ರಮ ಕೂಟದಲ್ಲಿ ಭಾಗಿಯಾಗಿದ್ದ ತಂಡವನ್ನು ರೆಡ್‌ ಹ್ಯಾಂಡಾಗಿ ಹಿಡಿದಿದ್ದಾರೆ. ಈ ತಂಡ ಗಾಂಜಾ ಸೇವಿಸಿ ಅನೈತಿಕ ಚಟುವಟಿಯಲ್ಲಿ ತೊಡಗಿಕೊಂಡಿದ್ದರು. ಕೂಡಲೇ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಅವರಿಗೆ ಒಪ್ಪಿಸಿದ್ದಾರೆ.

ಪ್ರೀತಿಯ ಹೆಸರಿನ ನಾಟಕವಾಡಿ ಯುವತಿಯನ್ನುಪುಸಲಾಯಿಸಿ ಕಾರಿನಲ್ಲಿ ಕರೆತಂದು ಮಾದಕ ದ್ರವ್ಯ ತಿನ್ನಿಸಿ ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಬೃಹತ್ ಇದಾಗಿದೆ ಎಂದು ಸಂಕಿಸಲಾಗಿದ್ದು ಈ ನಿಟ್ಟಿನಲ್ಲಿ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *