LATEST NEWS
ಬಾಕಿ ಇರುವ ಜಿಲ್ಲೆಗಳ ಅಧ್ಯಕ್ಷರ ನೇಮಕ ಮಾಡಿದ ರಾಜ್ಯ ಬಿಜೆಪಿ – ಉಡುಪಿಗೆ ಕುತ್ಯಾರು ನವೀನ್ ಶೆಟ್ಟಿ

ಬೆಂಗಳೂರು, ಜೂನ್ 11: ಕಳೆದ ಕೆಲವು ತಿಂಗಳಿನಿಂದ ಬಾಕಿ ಇದ್ದಿದ್ದ ಜಿಲ್ಲೆಗಳ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಗೆ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
10 ಜಿಲ್ಲಾ ಘಟಕಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಿಸಿ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಇಂದು (ಜೂನ್ 11) ಆದೇಶ ಹೊರಡಿಸಿದ್ದಾರೆ. ಮೈಸೂರು ಗ್ರಾಮಾಂತರ, ಹಾಸನ, ಕೊಡಗು, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದ್ದು, ಪಕ್ಷದ ಸಂಘಟನೆಯನ್ನು ಸಧೃಡಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸುವ ಶಕ್ತಿ, ಪಕ್ಷ ವರ್ಚಸ್ಸು ಹೆಚ್ಚಿಸುವಲ್ಲಿ ಶ್ರಮಿಸುವಿರಿ ಎಂದು ಗಣೇಶ್ ಕಾರ್ಣಿಕ್ ಅವರು ನೂತನ ಜಿಲ್ಲಾಧ್ಯಕ್ಷರುಗಳಿಗೆ ಶುಭ ಹಾರೈಸಿದ್ದಾರೆ.

ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ.
ಹಾಸನ – ಸಿದ್ದೇಶ್ ನಾಗೇಂದ್ರ.
ಕೊಡಗು – ರವಿ ಕಾಳಪ್ಪ
ಉಡುಪಿ – ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ – ಎನ್ ರಾಜಶೇಖರ
ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
ತುಮಕೂರು – ಎಚ್.ಎಸ್. ರವಿಕುಮಾರ್ (ಹೆಬ್ಬಾಕ)
ಮಧುಗಿರಿ – ಚಿದಾನಂದ ಗೌಡ
ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)