Connect with us

LATEST NEWS

ಸದ್ಯದಲ್ಲೇ ಕೈ ಹಿಡಿಯಲಿದ್ದಾರೆ ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ…..!!

ಉಡುಪಿ ಸೆಪ್ಟೆಂಬರ್ 08: ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಇದೀಗ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಇದೀಗ ಕೈ ಹಿಡಿಯಲು ಹೊರಟಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಡಿಕೆಶಿ ಜೊತೆ ಭೇಟಿ ಮಾಡಿ ಮಾತುಕತೆ ನಡೆಸಿರುವ ಅವರು ಬಹುತೇಕ ಕಾಂಗ್ರೇಸ್ ಸೇರ್ಪಡೆ ಖಚಿತವಾಗಿದೆ.


ಈ ಬಗ್ಗೆ ಮಾತನಾಡಿದ ಅವರು ಬೈಂದೂರಲ್ಲಿ ದೊಡ್ಡ ಮಟ್ಟದಲ್ಲಿ ಪಕ್ಷ ಕಟ್ಟಿದ ನನ್ನನ್ನು ಜೋರಾಗಿದ್ದೇನೆ, ಸಮರ್ಥತೆ ಇದ ಎಂದು ತುಳಿದು ಹಾಕಿದ್ದಾರೆ. ಯಾರು ಸಮರ್ಥರಿರುತ್ತಾರೋ ಅವರಿಗೆ ಬಿಜೆಪಿಯಲ್ಲಿ ಜಾಗ ಇಲ್ಲ ಎನ್ನುವುದು ಸಾಬೀತಾಗಿದೆ. ಇನ್ನು ಮುಂದೆ ಇಂತಹ ಪಕ್ಷದ ನಾಯಕನಾಗಿ ನಾನು ಇರಲು ಸಾಧ್ಯವಿಲ್ಲ. ಮುಂದೆ ಬಿಜೆಪಿಗೆ ಒಳ್ಳೆಯ ದಿನಗಳೂ ಇಲ್ಲ ಎಂದು ಬೈಂದೂರು ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ್‌ಶೆಟ್ಟಿ ಭವಿಷ್ಯ ನುಡಿದಿದ್ದಾರೆ.


ಬಿಜೆಪಿಗೆ ಇನ್ನೂ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ. ಬಿಜೆಪಿಯವರು ಹಾಗ್ ಮಾಡ್ತೀನೆ, ಹೀಗ್ ಮಾಡ್ತೀನಿ ಅಂತ ಸುಮ್ ಸುಮ್ಮ ಬಟಾಟೆ ಹೊಡಿತಾರೆ. ಅವರ ಬಳಿ ಏನೂ ಮಾಡೋದಕ್ಕೆ ಆಗೋದಿಲ್ಲ. ಜನಮನವನ್ನು ಗೆಲ್ಲಲು ಸಾಧ್ಯವಿಲ್ಲ. ಕರಾವಳಿ ಬಿಟ್ಟರೆ ಬೇರೆ ಎಲ್ಲಾ ಕಡೆಗಳಲ್ಲೂ ಬಿಜೆಪಿ ತನ್ನ ಹೆಸರನ್ನು ಹಾಳು ಮಾಡಿಕೊಂಡಿದೆ ಎ೦ದು ಮಾಜಿ ಶಾಸಕ ಬಿ.ಎಮ್. ಸುಕುಮಾರ್‌ಶೆಟ್ಟಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಹಿಡಿತದಲ್ಲಿದ್ದ ಬೈಂದೂರು ಕ್ಷೇತ್ರವನ್ನು ಬಿಜೆಪಿ ಭದ್ರಕೋಟೆಯಾಗಿ ಕಟ್ಟಿದ್ದೇನೆ ಆದರೆ ನನ್ನನ್ನು ತುಳಿದು ಹಾಕಿದ್ದಾರೆ ಎಂದು ಬಿಜೆಪಿ ನಡೆದುಕೊಂಡ ರೀತಿಯ ಬಗ್ಗೆ ಅವರು ನೋವು ತೋಡಿಕೊಂಡರು.
ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಬುಧವಾರ ಬೈಂದೂರಿನ ಮಾಜಿ ಶಾಸಕಾರದ ಗೋಪಾಲ ಪೂಜಾರಿ ಹಾಗೂ ಶೃಂಗೇರಿ ಶಾಸಕರ ಜೊತೆಗೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಬಂದಿದ್ದೇನೆ. ಪಕ್ಷಕ್ಕೆ ಬರುವಂತೆ ಡಿಕೆಶಿ ಆಹ್ವಾನ ನೀಡಿದ್ದಾರೆ. ಗ್ರೀನ್ ಸಿಗ್ನಲ್ ಕೊಟ್ಟಿದ್ದೇನೆ. ದೊಡ್ಡ ಮಟ್ಟದಲ್ಲಿ ಸಮಾರಂಭ ಮಾಡಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತೇನೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *