KARNATAKA
ಬಿಜೆಪಿಯಿಂದ 6 ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ

ಬೆಂಗಳೂರು ಮಾರ್ಚ್ 26: ಬಿಜೆಪಿ ರೆಬೆಲ್ ನಾಯಕ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಬಿಜೆಪಿ ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘನೆ ಮಾಡಿದ್ದಕ್ಕಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ. ಅಲ್ಲದೇ ಇತರೆ ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ