DAKSHINA KANNADA
ದೇಯಿ ಬೈದೆದಿ ಅವಮಾನ ಖಂಡಿಸಿ ಬಿಜೆಪಿ ಜಾಥಾ
ದೇಯಿ ಬೈದೆದಿ ಅವಮಾನ ಖಂಡಿಸಿ ಬಿಜೆಪಿ ಜಾಥಾ
ಪುತ್ತೂರು,ಅಕ್ಟೋಬರ್ 9: ತುಳುನಾಡಿದ ಐತಿಹಾಸಿಕ ವೀರ ಪುರುಷರಾದ ಕೋಟಿ-ಚೆನ್ನಯರ ತಾಯಿ ದೇಯಿ ಬೈದೆದಿ ಗೆ ಮಾಡಿದ ಅವಮಾನವನ್ನು ಖಂಡಿಸಿ ಬಿಜೆಪಿ ಪಕ್ಷ ನಾಳೆ (ಅಕ್ಟೋಬರ್ 10) ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡಿದೆ.
ತಿಂಗಳ ಹಿಂದೆ ಪುತ್ತೂರಿನ ಈಶ್ವರಮಂಗಲದ ಹಮೀದ್ ಎನ್ನುವ ವ್ಯಕ್ತಿ ಪುತ್ತೂರಿನ ಪಡುಮಲೆಯಲ್ಲಿರುವ ದೇಯಿ ಬೈದೆದಿ ಔಷಧೀಯ ವನದಲ್ಲಿದ್ದ ದೇಯಿ ಬೈದೆದಿ ಪುತ್ಥಳಿಯನ್ನು ಮುಟ್ಟಿ ಅಸಹ್ಯವಾಗಿ ವರ್ತಿಸಿದ್ದ. ಅಲ್ಲದೆ ಅವರ ಚಿತ್ರವನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ. ಈ ಚಿತ್ರ ಭಾರೀ ವಿರೋಧಕ್ಕೂ ಕಾರಣವಾಗಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೋಲೀಸರು ಆತನನ್ನು ಬಂಧಿಸಿದ್ದರು. ಘಟನೆಯನ್ನು ಖಂಡಿಸಿ ಹಲವು ಹಿಂದೂ ಪರ ಸಂಘಟನೆಗಳು ಹಾಗೂ ಬಿಲ್ಲವ ಸಂಘಟನೆಗಳು ಪ್ರತಿಭಟನೆಯನ್ನು ಈ ಹಿಂದೆಯೇ ನಡೆಸಿದೆ. ಇದೀಗ ಬಿಜೆಪಿ ಪಕ್ಷ ಪುತ್ತೂರಿನಿಂದ ಪಡುಮಲೆಯಲ್ಲಿರುವ ದೇಯಿ ಬೈದೆದಿ ವನದವರೆಗೆ ಕಾಲ್ನಡಿಗೆ ಜಾಥಾ ನಡೆಸಲಿದೆ. ಸುಮಾರು 2 ರಿಂದ 3 ಸಾವಿರ ಜನ ಈ ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಿಂದ ನಾಳೆ ಬೆಳಿಗ್ಗೆ 9 (ಅಕ್ಟೋಬರ್ 10) ಗಂಟೆಗೆ ಹೊರಡಲಿರುವ ಜಾಥಾದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ.
Facebook Comments
You may like
ಚಡ್ಡಿ ಕದ್ದು ಧರಿಸಿದ್ದಕ್ಕೆ ಸಹೋದ್ಯೋಗಿಯನ್ನು ಚಾಕುವಿನಿಂದ ಇರಿದು ಕೊಂದ!
ಸುರತ್ಕಲ್ ನ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ
ತೈಲ ದರ ಹೆಚ್ಚಾದರೂ ಚಿಂತೆಯಿಲ್ಲ ಎನ್ನುವವರಿಗೆ ಲೀಟರಿಗೆ 1 ಸಾವಿರ ದರ ವಿಧಿಸಿ : ಯು.ಟಿ. ಖಾದರ್
ಅಕ್ರಮ ಮರಳುಗಾರಿಕೆ ತಡೆಯಲು ಸ್ವತಃ ಫಿಲ್ಡ್ ಗೆ ಇಳಿದ ಪೊಲೀಸ್ ಆಯುಕ್ತ
ಬಿಜೆಪಿ ರಾಜ್ಯಾಧ್ಯಕ್ಷರ ತವರಲ್ಲೇ ಭಿನ್ನಮತ ಸ್ಪೋಟ..ಜಿಲ್ಲಾ ಪಂಚಾಯತ್ ಸದಸ್ಯ ಸೇರಿ ನಾಲ್ವರು ಉಚ್ಚಾಟನೆ
ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆದ ಹುಂಜ…!?
You must be logged in to post a comment Login