Connect with us

    DAKSHINA KANNADA

    ಬಿಜೆಪಿಯ ಬೀಷ್ಮ ರಾಮ್ ಭಟ್ ನಿಧನ

    ಪುತ್ತೂರು, ಡಿಸೆಂಬರ್ 06: ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅನಾರೋಗ್ಯದಿಂದ ಬಳಲುತ್ತಿದ್ದ ರಾಮ್ ಭಟ್ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

    ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಇತರ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ ರಾಮ್ ಭಟ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ರಾಮ್ ಭಟ್ ಆರೋಗ್ಯ ವಿಚಾರಣೆ ಮಾಡಿದ್ದರು.

    92 ವರ್ಷ ಪ್ರಾಯದ ರಾಮ್ ಭಟ್ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ನಾಯಕರಲ್ಲಿ ಒಬ್ಬರು ರಾಜ್ಯದಲ್ಲಿದ್ದ ಇಬ್ಬರು ಬಿಜೆಪಿ ಶಾಸಕರಲ್ಲಿ ರಾಮ್ ಭಟ್ ಒಬ್ಬರಾಗಿದ್ದರು. ಕೆಲ ಸಮಯದ ಕಾಲ ರಾಜ್ಯ ಬಿಜೆಪಿ ನಾಯಕರೊಂದಿಗೆ ಮುನಿಸಿಕೊಂಡು ಸ್ವಾಭಿಮಾನಿ ವೇದಿಕೆ ಆರಂಭಿಸಿದ್ದ ರಾಮ್ ಭಟ್, ಮಾಜಿ ಶಾಸಕ ಶಕುಂತಲಾ ಶೆಟ್ಟಿಯವರನ್ನು ಬಿಜೆಪಿ ಅಭ್ಯರ್ಥಿಯ ವಿರುದ್ಧ ಕಣಕ್ಕಿಳಿಸಿದ್ದರು.

    ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಬಳಿಕ ಬಿಜೆಪಿಗೆ ಮರಳಿದ್ದರು. ರಾಮ್ ಭಟ್ ಅಲಗುವಿಕೆಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply