Connect with us

DAKSHINA KANNADA

ಅಯೋಧ್ಯೆ ಸೋಲು – ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡ ಪುತ್ತೂರಿನ ಬಿಜೆಪಿ ಕಾರ್ಯಕರ್ತ

ಪುತ್ತೂರು ಜೂನ್ 06: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಬಿಜೆಪಿ ಕಾರ್ಯಕರ್ತರಿಗೆ ಭಾರೀ ದುಃಖ ತಂದಿದ್ದು, ಪುತ್ತೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ಬಿಜೆಪಿ ಅಭ್ಯರ್ಥಿ ಲಲ್ಲುಸಿಂಗ್ ಅವರಿಗೆ ಕರೆ ಮಾಡಿ ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ.


ಫೈಜಾಬಾದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಗೆ ದೂರವಾಣಿ ಕರೆ ಮಾಡಿದ ಪುತ್ತೂರಿನ ಬಿಜೆಪಿ ಕಾರ್ಯಕರ್ತ ಜಗದೀಶ್ ರೈ ಅವರು ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಸೋಲಿನ ಕಾರಣವನ್ನು ಅಭ್ಯರ್ಥಿಯಲ್ಲಿ ಪ್ರಶ್ನಿಸಿದ ಪುತ್ತೂರಿನ ಬಿಜೆಪಿ ಕಾರ್ಯಕರ್ತ, ಲೋಕಸಭಾ ಸದಸ್ಯರಾಗಿ ಒಂದು ಬಾರಿಯೂ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಯೋಗಿಜಿಯವರು ನಿಮ್ಮನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆದಿದ್ದರು. ಆದರೂ ನಿಮಗೆ ಟಿಕೆಟ್ ನೀಡಲಾಗಿತ್ತು ಎಂದಿದ್ದಾರೆ.

ಅಯೋಧ್ಯೆಯ ಜನ ನಿಮ್ಮನ್ನು ತಿರಸ್ಕರಿಸಿದ್ದರೂ ಮತ್ತೆ ಮತ್ತೆ ಯಾಕೆ ಚುನಾವಣೆಗೆ ಸ್ಪರ್ಧಿಸಿದಿರಿ, ನೀವು ಸೋಲೋದಕ್ಕೆ ಏನು ಕಾರಣ ಎಂದು ಪ್ರಶ್ನಿಸಿದ್ದಾರೆ. ಅಯೋಧ್ಯೆಯಲ್ಲಿ ನಿಮ್ಮ ಸೋಲಿನಿಂದಾಗಿ ನಮ್ಮಂತಹ ಬಿಜೆಪಿ ಕಾರ್ಯಕರ್ತರಿಗೆ ಅವಮಾನವಾಗಿದೆ. ರಾಮಮಂದಿರ ಇರುವ ಕ್ಷೇತ್ರದಲ್ಲೇ ಬಿಜೆಪಿ ಸೋತಿದೆ ಎನ್ನುವ ಕುಹಕ ಕೇಳುವಂತಾಗಿದೆ ಎಂದರು. ಇದರಿಂದಾಗಿ ಪ್ರಧಾನಿ ಮೋದಿಜಿಯವರ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಲಲ್ಲುಸಿಂಗ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *