Connect with us

    LATEST NEWS

    ಕೊರೋನಾ ಭೀತಿ – ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ

    ಕೊರೋನಾ ಭೀತಿ – ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ

    ಮಂಗಳೂರು ಮಾ.14: ಜಗತ್ತನ್ನು ಕಾಡುತ್ತಿರುವ ಮಹಾ ಮಾರಿ ಕೊರೋನಾ ಭೀತಿ ನಿವಾರಣೆಗಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.

    ಈ ವೇಳೆ ಮಾತನಾಡಿದ ಅವರು, ಜಗತ್ತನ್ನು ಕಾಡುತ್ತಿರುವ ಕೊರೆನೋ ಮಹಾಮಾರಿ ಭಾರತದ ವಿವಿಧ ಕಡೆಗಳಲ್ಲಿ ಹಬ್ಬುತ್ತಿರುವುದು ಆತಂಕ ಸೃಷ್ಠಿಸಿದ್ದು, ದೇಶದಲ್ಲಿ ಉಂಟಾಗಿರುವ ಕೊರೆನೋ ಭೀತಿ ದೂರವಾಗುವ ನಿಟ್ಟಿನಲ್ಲಿ ಮಂಗಳೂರಿನ ಎಲ್ಲಾ ದೇವಸ್ಥಾನ,ದೈವಸ್ಥಾನ, ಮಠ- ಮಂದಿರ,ಚರ್ಚ್, ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಆಡಳಿತ ಮಂಡಳಿ ಹಾಗೂ ನಾಗರಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

    ಇಂದು ರಥಬೀದಿ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಹಾಗೂ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಶಾಸಕರು ಮನವಿ ಮಾಡಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply