DAKSHINA KANNADA
ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಚುನಾವಣಾ ರಣತಂತ್ರ
ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಚುನಾವಣಾ ರಣತಂತ್ರ
ಮಂಗಳೂರು ಸೆಪ್ಟೆಂಬರ್ 30: ಕೇರಳದ ಕಣ್ಣೂರಿನಿಂದ ತಿರುವನಂತಪುರಂ ವರೆಗೆ ನಡೆಯುವ ಜನರಕ್ಷಾಯಾತ್ರೆ ಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭಾಗವಹಿಸುವುದು ಖಚಿತವಾಗಿದೆ. ಅಕ್ಟೋಬರ್ 3 ರಂದು ಆಯೋಜಿಸಿರುವ ಜನರಕ್ಷಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಚಾಲನೆ ನೀಡಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಅಮಿತ್ ಷಾ ಈ ಮೊದಲು ಅಕ್ಟೋಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಕ್ಟೋಬರ್ 2 ರಂದು ಮದ್ಯಾಹ್ನ ಮಂಗಳೂರು ಅಂತರಾಷ್ರ್ಟೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಷಾ ನಂತರ ನೆರವಾಗಿ ಕೇರಳಕ್ಕೆ ತೆರಳಲಿದ್ದಾರೆ.
ಮಂಗಳೂರಿನಲ್ಲಿ ಅಮಿತ್ ಷಾ ಅವರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾದ್ಯಕ್ಷ ಸಂಜೀವ ಮಟಂದೂರು, ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಅಮಿತ್ ಷಾ ಅಕ್ಟೋಬರ್ 3 ರಂದು ಕಣ್ಣೂರಿನಲ್ಲಿ ಜನರಕ್ಷಾ ಯಾತ್ರೆ ಮುಗಿಸಿ ಮಂಗಳೂರಿಗೆ ಮರಳಿ ಅಕ್ಟೋಬರ್ 4 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಹಾಗು ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ನಂತರ ಮಂಗಳೂರಿನ ಟಿ ಎಂ ಎ ಪೈ ಸಭಾಂಗಣ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖರೊಂದಿಗೆ ಅಮಿತ್ ಷಾ ಸಂವಾದ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು. ಅಕ್ಟೋಬರ್ 4 ರಂದು ಮಂಗಳೂರಿನಲ್ಲಿಯೇ ತಂಗಲಿರುವ ಅಮಿತ್ ಷಾ ಅಕ್ಟೋಬರ್ 5 ರಂದು ಮುಂಜಾನೆ ಮಂಗಳೂರಿನಿಂದ ತೆರಳಲಿದ್ದಾರೆ.
You must be logged in to post a comment Login