Connect with us

    DAKSHINA KANNADA

    ಬಂಧಿತ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರಕ್ಕೂ ಬಿಜೆಪಿಗೂ ಸಂಬಂಧವಿಲ್ಲ – ಮಾಜಿ ಸಿಎಂ ಬೊಮ್ಮಾಯಿ

    ಕೋಟಿ ಗಟ್ಟಲೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

    ಮಂಗಳೂರು : ಕೋಟಿ ಗಟ್ಟಲೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

    ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಲವು ಹಿಂದೂಪರ ಸಂಘಟನೆಗಳು ಹೋರಾಟ ಮಾಡುತ್ತಿರುತ್ತಿವೆ,

    ಆದ್ದರಿಂದ ಚೈತ್ರಾಗೂ ಪಕ್ಷಕ್ಕೂ ಸಂಬಂಧ ಇಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು.

    ಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ.

    ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ನಂತರ ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply