LATEST NEWS
ಐವನ್ ಡಿಸೋಜಾ ಅವರನ್ನು ಗಡಿಪಾರು ಮಾಡಲು ನಾವು ಉಪವಾಸ ಕೂರಬೇಕಾಗುತ್ತದೆ- ನಳಿನ್ ಕುಮಾರ್ ಕಟೀಲ್
ಐವನ್ ಡಿಸೋಜಾ ಅವರನ್ನು ಗಡಿಪಾರು ಮಾಡಲು ನಾವು ಉಪವಾಸ ಕೂರಬೇಕಾಗುತ್ತದೆ- ನಳಿನ್ ಕುಮಾರ್ ಕಟೀಲ್
ಮಂಗಳೂರು ಜನವರಿ 7: ಮಂಗಳೂರಿನಲ್ಲಿ ಶಾಂತಿ ಕಾಪಾಡಿದ್ದೇ ಐವನ್ ಡಿಸೋಜಾ ಹಾಗಾಗಿ ಅವರನ್ನೇ ಗಡಿಪಾರು ಮಾಡಲು ನಾವು ಉಪವಾಸ ಕೂರಬೇಕಾಗುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಸುರತ್ಕಲ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಪೋಸ್ಟ್ ಕಾರ್ಡ್ ಸಹಿ ಅಭಿಯಾನದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಗೃಹ ಸಚಿವ ಅಮಿತ್ ಶಾ ಬಂದರೆ ಶಾಂತಿ ಕದಡುತ್ತದೆ, ಅದಕ್ಕಾಗಿ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂಬ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದಲ್ಲಿ ಮೂರು ಕಡೆ ಬೃಹತ್ ಸಮಾವೇಶ ಮಾಡಲು ನಿರ್ಧರಿಸಲಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಂಗಳೂರಿನಲ್ಲಿ ಈ ಸಮಾವೇಶ ನಡೆಯಲಿದೆ. ಸಿಂಧನೂರಿನಲ್ಲಿ ಬಾಂಗ್ಲಾದೇಶಿಯರು, ಪಾಕಿಸ್ತಾನಿಯರು ಇರುವ ಕಾರಣಕ್ಕೆ ಅಲ್ಲಿ ಕೂಡ ಸಮಾವೇಶ ಚಿಂತನೆ ಇದೆ. ಇನ್ನುಳಿದಂತೆ ಜಿಲ್ಲಾಕೇಂದ್ರಗಳಲ್ಲಿ ಸಮಾವೇಶ ನಡೆಯಲಿದೆ. ಯಾವ ಸಮಾವೇಶದಲ್ಲಿ ಯಾರು ಪಾಲ್ಗೊಳ್ಳುತ್ತಾರೆ ಎಂದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು.
You must be logged in to post a comment Login