Connect with us

LATEST NEWS

ಮಂಗಳೂರು – ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮಂಗಳೂರು ಜೂನ್ 28: ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.


ಮಂಗಳೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ. ನಗರದ ಕ್ಲಾಕ್‌ ಟವರ್ ಬಳಿ ಪ್ರತಿಭಟನಾ ಸಭೆ ನಡೆಸಿದ್ದು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಮುಖಂಡರು,ಕಾರ್ಯಕರ್ತರು ಮೆರವಣಿಗೆ ಮೂಲಕ ತೆರಳಲು ಯತ್ನಿಸಿದರು.

ತಕ್ಷಣ ರಸ್ತೆ ಮಧ್ಯೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ನೂಕಾಟ ತಳ್ಳಾಟ ನಡೆದಿದೆ. ಪ್ರತಿಭಟನೆಯಲ್ಲಿ‌ ಭಾಗಿಯಾದ ಮಾಜಿ‌ ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ‌ ಸೇರಿದಂತೆ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *