LATEST NEWS
ಕೇಸರಿ ಧ್ವಜದ ಬಗ್ಗೆ ಈಶ್ವರಪ್ಪನವರ ಹೇಳಿಕೆ ಬಗ್ಗೆ ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆಯಿದೆ – ಕುಯಿಲಾಡಿ ಸುರೇಶ್ ನಾಯಕ್
ಉಡುಪಿ ಫೆಬ್ರವರಿ 26: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ವಿಧಾನಸಭೆಯ ಅಧಿವೇಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಣಿಪಾಲದ ಟೈಗರ್ ಸರ್ಕಲ್ ಬಳಿ ಪ್ರತಿಭಟನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರಕಾರ ವಿರುದ್ಧ ಹಾಗೂ ಡಿಕೆಶಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಈಶ್ವರಪ್ಪನವರು ಮುಂದೊಂದು ದಿನ ಕೇಸರಿ ಧ್ವಜ ನಮ್ಮ ರಾಷ್ಟ್ರಧ್ವಜ ಆಗಬಹುದು ಎಂದಿದ್ದಾರೆ. ಇವತ್ತೇ, ನಾಳೆಯೇ ಆಗುತ್ತದೆ ಎಂದು ಅವರೇ ಏನು ಹೇಳಿಲ್ಲ. ಈ ಮಾತನ್ನು ನಾನು ಕೂಡ ಸಮರ್ಥನೆ ಮಾಡಿಕೊಳ್ಳುತ್ತಿದ್ದು ಮುಂದೊಂದು ದಿನ ಆದ್ರೂ ಆಗಬಹುದು. ಈ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್ ವಿಧಾನಸಭಾ ಅಧಿವೇಶನಕ್ಕೆ ವಿನಾಕಾರಣ ಅಡ್ಡಿ ಉಂಟು ಮಾಡುತ್ತಿದ್ದು, ಹಿಜಾಬ್ ವಿಚಾರವನ್ನ ಮರೆಮಾಚಲು ಕಾಂಗ್ರೆಸ್ ಈ ರೀತಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
You must be logged in to post a comment Login