Connect with us

LATEST NEWS

ಅಂಗಾರ ಟಿಕೆಟ್ ನಿರಾಕರಣೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ ವಳಲಂಬೆ ರಾಜೀನಾಮೆ

ಸುಳ್ಯ ಎಪ್ರಿಲ್ 12: ಸುಳ್ಯದ ಸೋಲಿಲ್ಲದ ಸರದಾರ ಸಚಿವ ಅಂಗಾರಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಣೆ ಮಾಡಿದ್ದು, ಅಸಮಧಾನಕ್ಕೆ ಕಾರಣವಾಗಿದ್ದು, ಈ ಹಿನ್ನಲೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ ವಳಲಂಬೆ ರಾಜೀನಾಮೆ ನೀಡಿದ್ದಾರೆ.


‘ಪ್ರಾಮಾಣಿಕ ಕಾರ್ಯಕರ್ತರೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಮನಸ್ಸಿಗೆ ನೋವಾಗಿದೆ. ಆದ್ದರಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ವೆಂಕಟ ವಳಲಂಬೆ ತಿಳಿಸಿದ್ದಾರೆ. ‘ಸಾಮಾನ್ಯ ಮನೆತನದಿಂದ ಬಂದಿರುವ ಅಂಗಾರ ತಮ್ಮ ಸರಳ ಸಜ್ಜನಿಕೆಯಿಂದ ಜನಮನ ಗೆದ್ದಿದ್ದವು. ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಪಕ್ಷದ ನಡೆಯಿಂದ ಬೇಸರವಾಗಿದ್ದು, ರಾಜೀನಾಮೆ ಪತ್ರವನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರಿಗೆ ಸಲ್ಲಿಸಿದ್ದೇನೆ’ ಎಂದು ವೆಂಕಟ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *