Connect with us

LATEST NEWS

ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ – ಮುಂಚೂಣಿಯಲ್ಲಿ ಉಡುಪಿ ಜಿಲ್ಲೆಯ ಶಾಸಕರ ಹೆಸರು…?

ಉಡುಪಿ ಜೂನ್ 27: ಕರ್ನಾಟಕದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ದೇಶದಲ್ಲಿ ಇತರ ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರ ಆಯ್ಕೆ ಜೊತೆ ಕರ್ನಾಟಕದಲ್ಲೂ ನೂತನ ಅಧ್ಯಕ್ಷರ ಆಯ್ಕೆಯಾಗಲಿದೆ ಎಂದು ವರದಿಯಾಗಿದೆ.


ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ‌ ಬದಲಾಗಿ ಬೇರೆಯವರನ್ನು ನೇಮಿಸಲು ಹೈಕಮಾಂಡ್ ಆರು ತಿಂಗಳ ಹಿಂದೆ ಗಂಭೀರ ಚಿಂತನೆ ನಡೆಸಿತ್ತು ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿಯೊಬ್ಬರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಕಳೆದ ಆರು ತಿಂಗಳಿನಿಂದ ಕೆಲವು ಗಂಭೀರ ಬೆಳವಣಿಗೆಗಳು ನಡೆದಿರುವ ಬಗ್ಗೆ ಕುತೂಹಲಕರ ಮಾಹಿತಿಗಳು ಹೊರಬಿದ್ದಿವೆ.


ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಹುದ್ದೆಗೆ ಮೂರ್ನಾಲ್ಕು ಹೆಸರುಗಳು ಕೇಳಿ ಬರುತ್ತಿದೆ. ಈ ನಡುವೆ, ಹಾಲೀ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷದ ನಾಯಕ ಆರ್.ಅಶೋಕ್ ದೆಹಲಿಗೆ ಹೋಗಿ ಬಂದಿದ್ದಾರೆ.ಈಗ, ಅಧ್ಯಕ್ಷ ಹುದ್ದೆಗೆ ಇನ್ನೊಬ್ಬರ ಹೆಸರು ಕೇಳಿ ಬರುತ್ತಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮತ್ತು ಪ್ರಖರ ಹಿಂದೂತ್ವವಾದಿ ವಿ.ಸುನಿಲ್ ಕುಮಾರ್ ಅವರ ಹೆಸರು ಇದ್ದಕ್ಕಿದ್ದಂತೆ ಮುನ್ನಲೆಗೆ ಬಂದಿದೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸಲು ನಾನು ಸಿದ್ದ ಎನ್ನುವ ಪ್ರತಿಕ್ರಿಯೆ ಕೂಡಾ ಸುನಿಲ್ ಕುಮಾರ್ ಅವರಿಂದ ಬಂದಿದೆ.


ಇನ್ನು ಬಿಜೆಪಿಯಲ್ಲಿ ಆಗಾಗ ಸಕ್ರಿಯವಾಗಿರುವ ತಟಸ್ಥ ಬಣ ಕೇಂದ್ರ ಸಚಿವ ವಿ. ಸೋಮಣ್ಣ  ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೇರಿಸುವ ‌ನಿಟ್ಟಿನಲ್ಲಿ ತೀವ್ರ ಪ್ರಯತ್ನವನ್ನೂ ನಡೆಸಿತ್ತು. ಕೇಂದ್ರ ಸಚಿವ ಸ್ಥಾ‌ನದ ಜೊತೆಗೆ ಅಧ್ಯಕ್ಷ ಸ್ಥಾ‌ನ ಎಂದಾದರೆ ಒಪ್ಪಿಕೊಳ್ಳಬಹುದು ಎಂಬ ಮನಸ್ಥಿತಿಗೂ ಸೋಮಣ್ಣ ತಲುಪಿದ್ದರು. ಆದರೆ, ಅವರಿಗೆ ಕೇಂದ್ರ ಸಚಿವರಾಗಿಯೇ ಒಳ್ಳೆಯ ಕೆಲಸ ಮಾಡುವಂತೆ ಹೈಕಮಾಂಡ್ ಸೂಚಿಸಿದ ಕಾರಣ ಆ ಪ್ರಸ್ತಾಪ ಅಲ್ಲಿಗೆ ಕೊನೆಗೊಂಡಂತಾಗಿದೆ. ವಿಜಯೇಂದ್ರ‌ ಹೆಸರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಕೋಟಾದಲ್ಲಿ ವಿ. ಸುನೀಲ್ ಕುಮಾರ್, ಲಿಂಗಾಯತ ಮತ್ತು ಪಂಚಮಸಾಲಿ ಕೋಟಾದಲ್ಲಿ ಅರವಿಂದ ಬೆಲ್ಲದ್ ಮತ್ತು ದಲಿತ ಕೋಟಾದಲ್ಲಿ ಅರವಿಂದ ಲಿಂಬಾವಳಿ ಅವನ್ನು ಪರಿಗಣಿಸಬಹುದು ಎಂಬ ಅಭಿಪ್ರಾಯವನ್ನೂ ಹೈಕಮಾಂಡ್ ಹೊಂದಿದೆ ಎಂಬುದನ್ನು ನಡ್ಡಾರನ್ನು ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಸ್ವತಃ ಸುನೀಲ್ ಕುಮಾರ್ ಜೊತೆಗೇ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚಿಸಿದ್ದರು.

ಈ ಮಧ್ಯೆ ದೆಹಲಿ ಭೇಟಿಗೆ ಸ್ಪಷ್ಟನೆ ಕೊಟ್ಟಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ‌, ವಿಪಕ್ಷ ನಾಯಕರಾಗಿ ಅಶೋಕ್ ಉತ್ತಮ ಕೆಲಸ ಮಾಡಿದ್ದಾರೆ. ಅವರು ಬೇರೆ ಕೆಲಸಕ್ಕೆ ಹೋಗಿರಬಹುದು ಎಂದು ಹೇಳಿದ್ದಾರೆ. ಈ ಮೂಲಕ ತಮಗೂ ಒಳ್ಳೆಯದಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *