Connect with us

DAKSHINA KANNADA

ದಕ್ಷಿಣಕನ್ನಡ ಜಿಲ್ಲೆಯ ಉಳಿದ ಮೂರು ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ – ಪಾಲೇಮಾರ್ ಕೈ ತಪ್ಪಿದ ಬಿಜೆಪಿ ಟಿಕೆಟ್

ದಕ್ಷಿಣಕನ್ನಡ ಜಿಲ್ಲೆಯ ಉಳಿದ ಮೂರು ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ – ಪಾಲೇಮಾರ್ ಕೈ ತಪ್ಪಿದ ಬಿಜೆಪಿ ಟಿಕೆಟ್

ಮಂಗಳೂರು ಎಪ್ರಿಲ್ 20: ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಜೆಪಿ ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಗ್ಗಂಟಾಗಿ ಉಳಿದಿದ್ದ ಮಂಗಳೂರು , ಮಂಗಳೂರು ಉತ್ತರ , ಮಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಅತ್ಯಂತ ಕುತೂಹಲ ಕೆರಳಿಸಿದ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಜಿಎಸ್ ಬಿ ಸಮುದಾಯದ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಉತ್ತರ ಕ್ಷೇತ್ರಕ್ಕೆ ಬಂಟ ಸಮುದಾಯದ ಡಾ. ಭರತ್ ಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ನ ಯು.ಟಿ ಖಾದರ್ ಎದುರು ಸಂತೋಷ್ ಕುಮಾರ್ ರೈ ಅವರನ್ನು ಬಿಜೆಪಿ ಕಣಕ್ಕಿಳಿಸಲು ತೀರ್ಮಾನಿಸಿದೆ.

ಮಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರು ಟಿಕೆಟ್ ವಂಚಿತರಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *