Connect with us

    KARNATAKA

    ಸದಾನಂದ ಗೌಡರಿಗೆ ಬಿಜೆಪಿ ಟಿಕೆಟ್ ಜಸ್ಟ್ ಮಿಸ್..! ಕಾಂಗ್ರೆಸ್ ನಿಂದ ಬಂತಾ ಫೋನ್..!?

    ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾಗಿರುವ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರಿಗೆ ಈ ಬಾರಿಯ ಲೋಕಸಭಾ ಟಿಕೆಟ್  ತಪ್ಪಿದೆ ಅವರ ಬದಲಿಗೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

    ಬಿಜೆಪಿ ಹೈಕಮಾಂಡ್  ಫೋನ್ ಮೂಲಕ ಸದಾನಂದ ಗೌಡರಿಗೆ ಈ ವಿಷಯ ತಿಳಿಸಿದ್ದು ಕೊನೇ ಕ್ಷಣದಲ್ಲಿ ಟಿಕೆಟ್ ತಪ್ಪಿದ್ದು ಗೌಡರಿಗೆ ಶಾಕ್ ಆಗಿದೆ. ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 25 ಸಂಸದರಲ್ಲಿ ಕೆಲವು ಸಂಸದರಿಗೆ ಟಿಕೆಟ್ ಸಿಗುವುದಿಲ್ಲ ಎಂದು ಈ ಮೊದಲೇ ವದಂತಿಗಳು ಹರಡಿದ್ದವು. ಅವುಗಳಲ್ಲಿ ಸದಾನಂದ ಗೌಡರ ಹೆಸರೂ ಕೇಳಲ್ಪಟ್ಟಿತ್ತು. ಅದೀಗ ಖಾತ್ರಿಯಾದಂತಾಗಿದೆ.
    ಈ ವಿಚಾರಕ್ಕೆ ಪುಷ್ಠಿ ನೀಡುವಂತೆ ಸದಾನಂದ ಗೌಡರೂ, ಬೆಂಗಳೂರು ಲೋಕಸಭಾ ಕ್ಷೇತ್ರದ ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸಿ ಟ್ವೀಟ್ ಮಾಡಿದ್ದಾರೆ.  “ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

    ಡಿವಿ ಸದಾನಂದ ಗೌಡರಿಗೆ ಟಿಕೆಟ್ ತಪ್ಪಿದ ವಿಷಯದ ಬೆನ್ನಿಗೆ ಕಾಂಗ್ರೆಸ್ ಕರೆ  ಮಾಡಿದ್ದು ಡಿವಿಎಸ್‌ ಅವರನ್ನು ಪಕ್ಷಕ್ಕೆ ಸೇರುವಂತೆ ಅಹ್ವಾನ ನೀಡಿದೆ ಎನ್ನಲಾಗಿದ್ದು ಈ ಬಗ್ಗೆ ಪ್ರತಿಕ್ರೀಯಿಸಿರುವ ಡಿವಿಎಸ್‌ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು ಎಂದಿದ್ದಾರೆ.

     

    https://x.com/DVSadanandGowda/status/1767908547986440239?s=20

    Share Information
    Advertisement
    Click to comment

    You must be logged in to post a comment Login

    Leave a Reply