Connect with us

    LATEST NEWS

    ವಿಧಾನಪರಿಷತ್ ಉಪ ಚುನಾವಣೆ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲವು

    ಮಂಗಳೂರು, ಅಕ್ಟೋಬರ್ 24: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರುವಾದ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1704 ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.

    ಅಕ್ಟೋಬರ್ 21ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ಮಂಗಳೂರಿನ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ನಡೆಯಿತು. 12 ಟೇಬಲ್ ಗಳಲ್ಲಿ ಮತಗಳನ್ನು ವಿಂಗಡಿಸಿ ಎಣಿಕೆ ನಡೆಸಲಾಯಿತು. ಪ್ರತಿ ಟೇಬಲ್ ನಲ್ಲಿಯೂ ಬಿಜೆಪಿ ಅಭ್ಯರ್ಥಿಗೆ ಹೆಚ್ಚು ಮತಗಳು ಬಿದ್ದವು. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ 3656 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪರವಾಗಿ 1952 ಮತಗಳು ಬಿದ್ದವು.
    ಕಾಲೇಜು ಆವರಣದಲ್ಲಿ ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ನೆರೆದಿದ್ದು ಮಂಗಳೂರು ನಗರದಾದ್ಯಂತ ವಿಜಯೋತ್ಸವಕ್ಕೆ ಸಿದ್ಧತೆ ನಡೆಸಿದ್ದಾರೆ. 6032 ಮತದಾರರಲ್ಲಿ 5096 ಮತಗಳು ಚಲಾವಣೆ ಆಗಿದ್ದವು.

    Share Information
    Advertisement
    Click to comment

    You must be logged in to post a comment Login

    Leave a Reply