Connect with us

    BANTWAL

    ಬಿಜೆಪಿ ಕಾರ್ಯಕರ್ತ ಖಾಲಿದ್ ನಂದಾವರಗೆ ಜೀವಬೆದರಿಕೆ: ದೂರು ದಾಖಲು

    ಬಂಟ್ವಾಳ , ಆಗಸ್ಟ್ 19: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಬೋರ್ಡ್‌ ಸದಸ್ಯರ ಜೀವಬೆದರಿಕೆ ಇರುವ ಬಗ್ಗೆ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿಗೆ ದೂರು ನೀಡಿದ್ದಾರೆ.

    ದ.ಕ ಜಿಲ್ಲಾ ವಕ್ಫ್‌ ಬೋರ್ಡ್ ಸದಸ್ಯ ಖಾಲಿದ್ ನಂದಾವರ ಅವರು ಬಿಜೆಪಿಯ ಸಕ್ರಿಯ ಕಾರ್ಯಕತರು. ಜೊತೆಗೆ ಆರ್‌ಟಿಐ ಕಾರ್ಯಕರ್ತ. ಬಂಟ್ವಾಳದಲ್ಲಿ ನಡೆಯುತ್ತಿರುವ ಅಕ್ರಮ ಕಟ್ಟಡ, ಮರಳುಗಾರಿಕೆ ಸೇರಿ ಹಲವು ಅಕ್ರಮಗಳ ವಿರುದ್ಧ ಆಯಾ ಇಲಾಖೆಗೆ ಲಿಖಿತ ದೂರು ನೀಡುತ್ತಿದ್ದರು. ಈ ಬಗ್ಗೆ ಕೊಲ್ಲಿ ರಾಷ್ಟ್ರಗಳಿಂದ ಅವರಿಗೆ ಜೀವಬೆದರಿಕೆ ಕರೆಗಳು ಬರುತ್ತಿತ್ತು.

    ಈ ಬಗ್ಗೆ ಹಿಂದೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು. ಆ.18 ರಂದು ಖಾಲಿದ್ ಅವರ ಸ್ನೇಹಿತರೊಬ್ಬರು ಕರೆ ಮಾಡಿ “ನೀವು ಸ್ವಲ್ಪ ದಿನ ಹುಷಾರಾಗಿರಿ, ನಿಮ್ಮ ಮೇಲೆ ದಾಳಿ ನಡೆಸುವ ಸಂಭವ ಇದೆ” ಎಂದು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಖಾಲಿದ್‌ ಅವರು ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿಗೆ ದೂರು ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply