Connect with us

    DAKSHINA KANNADA

    ಬಿಜೆಪಿ ಯುವ ಮೋರ್ಚಾ ದ ಕ ಜಿಲ್ಲೆಯ ವತಿಯಿಂದ ಮಿಥುನ್ ರೈ ವಿರುದ್ದ ದೂರು ದಾಖಲು

    ಮಂಗಳೂರು, ಅಕ್ಟೋಬರ್ 11: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.ಬಿಜೆಪಿ ಯುವ ಮೋರ್ಚಾ ದ ಕ ಜಿಲ್ಲೆಯ ವತಿಯಿಂದ ಜಿಲ್ಲಾ ಯೂತ್ ಕಾಂಗ್ರೆಸ್ಸ್ ಅಧ್ಯಕ್ಷ ಮಿಥುನ್ ರೈ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಉತ್ತರ ಪ್ರದೇಶ ದ  ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಕಾಂಗ್ರೆಸ್ಸ್ ನಾಯಕರನ್ನು ಮೆಚ್ಚಿಸಲು ದ. ಕ ಜಿಲ್ಲೆಯಲ್ಲಿ ಶಾಂತಿ ಕದಡಲು ಪ್ರೇರೇಪಿಸಿದ್ದಾರೆ ಎಂದು ಬರ್ಕೆ ಪೊಲೀಸ್ ನಿರೀಕ್ಷಕರಿಗೆ ದೂರು ನೀಡದ್ದಾರೆ.

    ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಗುರುದತ್ ಜಿ ನಾಯಕ್ ಪ್ರಧಾನ ಕಾರ್ಯದರ್ಶಿಗಳಾದ ಸೂರಜ್ ಮರ್ನಾಡ್, ಸುದರ್ಶನ್ ಬಜ, ಹಿಂದುಳಿದ ವರ್ಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮತ್ತು ವಕೀಲರಾದ ಮಹೇಶ್ ಜೋಗಿ, ಯುವ ಮೋರ್ಚಾ ಉಪಾಧ್ಯಕ್ಷ ವಿನ್ಯಾಸ್ ಶೆಟ್ಟಿ , ಅಭಿಲಾಷ್ ಶೆಟ್ಟಿ, ಹಾಗೂ ಶಿವ್ ದೇಶ ಕೊಡಿ , ಅವಿಕ್ಷಿತ್ ರೈ, ಕಿರಣ್ ಶಂಕರ್ ಮಲ್ಯ ಜೊತೆಗಿದ್ದರು

    Share Information
    Advertisement
    Click to comment

    You must be logged in to post a comment Login

    Leave a Reply