LATEST NEWS
ಕೃಷ್ಣಮೃಗ ಚರ್ಮದ ಬೃಹತ್ ದಂಧೆ ಭೇದಿಸಿದ ಮಂಗಳೂರು ಅರಣ್ಯ ಸಂಚಾರಿ ದಳ

ಮಂಗಳೂರು : ಮಂಗಳೂರು ಫಾರೆಸ್ಟ್ ಸ್ಕ್ವಾಡ್ ನ(ಅರಣ್ಯ ಸಂಚಾರಿ ದಳ) ಅಧಿಕಾರಿ ಹಾಗೂ ಸಿಬ್ಬಂದಿಗಳು ಖಚಿತ ಮಾಹಿತಿ ಮೇರೆಗೆ ಯಾದಗಿರಿಗೆ ತೆರಳಿ ಕೃಷ್ಣ ಮೃಗದ ಚರ್ಮದ ಬೃಹತ್ ದಂಧೆಯನ್ನು ಬೇಧಿಸಿದ್ದು, ಆರು ಜನ ಆರೋಪಿಗಳ ಸಹಿತ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬೃಹತ್ ಕಾರ್ಯಾಚರಣೆ ವೇಳೆ 20 ಕೃಷ್ಣ ಮೃಗದ ಚರ್ಮ, 2 ಕೃಷ್ಣ ಮೃಗದ ಟ್ರೋಫಿ (ತಲೆಯ ಭಾಗ), ಒಂದು ಜೀವಂತ ಹೆಣ್ಣು ಮರಿ ಹಾಗೂ ದಂಧೆಗೆ ಬಳಸಿದ ಮೂರು ಬೈಕ್ ಸೇರಿದಂತೆ ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರಾಟ ಮಾಡುವ ಉದ್ದೇಶದಿಂದ ಈ ಆರೋಪಿಗಳು ಸೊತ್ತುಗಳನ್ನು ಹೊಂದಿದ್ದರು ಎಂಬ ಮಾಹಿತಿ ಲಭಿಸಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಮಂಗಳೂರು ಫಾರೆಸ್ಟ್ ಸ್ಕ್ವಾಡ್ ನ ಸಬ್ ಇನ್ಸ್ಪೆಕ್ಟರ್ ಪುರುಷೋತ್ತಮ, ಹೆಡ್ ಕಾನ್ಸ್ಟೇಬಲ್ ಜಗನ್ನಾಥ, ಸಿಬ್ಬಂದಿಗಳಾದ ಪ್ರವೀಣ್ ಜೆ, ಉದಯ ಕುಮಾರ್, ಮಹೇಶ್, ಶಿವಾನಂದ ಜಗದೀಶ್ ಇದ್ದರು.