DAKSHINA KANNADA
ಬದನಾಜೆ ಬಸ್ ನಿಲ್ದಾಣದಲ್ಲಿ ಆತಂಕ ಮೂಡಿಸಿದ ರಕ್ತದ ಕಲೆಗಳು….!!
ವಿಟ್ಲ ಜೂನ್ 29: ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.
ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.
You must be logged in to post a comment Login