KARNATAKA
ಬೆಂಗಳೂರು ನಡು ರಸ್ತೆಯಲ್ಲಿ ಹೊತ್ತಿ ಉರಿದ BMTC ಬಸ್, ಪ್ರಯಾಣಿಕರು ಪಾರು..!
ಬೆಂಗಳೂರು : ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಎಂ. ಜಿ . ರೋಡಿನಲ್ಲಿ ಬೆಳಗ್ಗೆ ಸಂಭವಿಸಿದೆ. ಅದೃಷ್ಟವಶತ್ ಪ್ರಯಾಣಿಕರು ಪಾರಾಗಿದ್ದಾರೆ.
ಘಟನೆ ವೇಳೆ ಬಸ್ಸಿನಲ್ಲಿ 30 ಮಂದಿ ಪ್ರಯಾಣಿರಿದ್ದರು, ಚಾಲಕನ ಸಮಯ ಪ್ರಜ್ಞೆ ಪ್ರಯಾಣಿಕರ ಜೀವ ಉಳಿಸಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬಿಎಂಟಿಸಿ ಬಸ್ ರೋಸ್ ಗಾರ್ಡನ್ ನಿಂದ ಶಿವಾಜಿ ನಗರಕ್ಕೆ ಬರುತ್ತಿತ್ತು. ದಾರಿ ಮಧ್ಯೆ ಎಂ.ಜಿ. ರೋಡ್ ನ ಅನಿಲ್ ಕುಂಬ್ಳೆ ಸಿಗ್ನಲ್ ನಲ್ಲಿ ಚಾಲಕ ಬಸ್ ನಿಲ್ಲಿಸಿದಾಗ ಬಂದ್ ಬಿದ್ದ ಬಸ್ ಸ್ಟಾರ್ಟ್ ಮಾಡಲು ಯತ್ನಿಸಿದಾಗ ಸ್ಟಾರ್ಟ್ ಆಗಲೇ ಇಲ್ಲ. ಚಾಲಕ 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಇಂಜಿನ್ ನ ಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಅಷ್ಟರಲ್ಲಿ ಬೆಂಕಿ ಸಂಪೂರ್ಣ ಬಸ್ ಆವರಿಸಿಯಾಗಿತ್ತು.
You must be logged in to post a comment Login