LATEST NEWS
ಬಾಡಿ ಬಿಲ್ಡರ್ ಭಾರತ್ ಕಿಶೋರ್ ಟೈಟಲ್ ವಿಜೇತ ಸಂತೋಷ್ ಕುಮಾರ್ ಉಳ್ಳಾಲ ಹೃದಯಾಘಾತದಿಂದ ನಿಧನ

ಮಂಗಳೂರು ಜುಲೈ 04; ಕರ್ನಾಟಕದಲ್ಲಿ ಏಕಾಏಕಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಇದೀಗ ದೇಹದಾರ್ಡ್ಯ ಪಟು ರೈಲ್ವೆ ಉದ್ಯೋಗಿಯಾಗಿರುವ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ (52) ಅವರು ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಉಳ್ಳಾಲದ ಉಳಿಯದವರಾದ ಅವರು ತೊಕ್ಕೊಟ್ಟಿನ ಶಕ್ತಿಭಾರತ್ ವ್ಯಾಯಾಮ ಶಾಲೆಯಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮಟ್ಟದ ದೇಹದಾರ್ಡ್ಯ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸಿದ್ದರು. ದೇಹದಾರ್ಡ್ಯ ಪಟುವಾಗಿ ರೈಲ್ವೇಯನ್ನು ಪ್ರತಿನಿಧಿಸಿದ್ದರು.
